Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:34 - ಪರಿಶುದ್ದ ಬೈಬಲ್‌

34 ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು. ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತುಮ್ಚೆ ಡೊಳೆ ತುಮ್ಚ್ಯಾ ಆಂಗಾಚೆ ದಿವೆ. ಕನ್ನಾ ತುಜೆ ಡೊಳೆ ಸಮಾ ಹಾತ್ ತನ್ನಾ ತುಜ್ಯಾ ಸಗ್ಳ್ಯಾ ಆಂಗಾಕ್ ಉಜ್ವೊಡ್ ರ್‍ಹಾತಾ.ಕನ್ನಾ ತುಮ್ಚೆ ಡೊಳೆ ಸಮಾ ನಾತ್, ತನ್ನಾ ತುಮ್ಚೆ ಸಗ್ಳೆ ಆಂಗುಚ್ ಕಾಳ್ಕಾತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:34
28 ತಿಳಿವುಗಳ ಹೋಲಿಕೆ  

ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.


ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಿಮ್ಮ ಕಣ್ಣುಗಳು ಕುರುಡಾಗಿವೆಯೋ? ನಿಮ್ಮ ಕಿವಿಗಳು ಕಿವುಡಾಗಿವೆಯೋ? ಮೊದಲೊಮ್ಮೆ, ನಮ್ಮ ಬಳಿ ಸಾಕಷ್ಟು ರೊಟ್ಟಿಗಳಿಲ್ಲದಿದ್ದಾಗ, ನಾನು ಏನು ಮಾಡಿದೆನೆಂಬುದನ್ನು ಜ್ಞಾಪಿಸಿಕೊಳ್ಳಿ.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.


ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.


ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.


ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.


ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


ಆದ್ದರಿಂದ ಎಚ್ಚರಿಕೆಯಾಗಿರು! ನಿನ್ನೊಳಗಿರುವ ಬೆಳಕು ಕತ್ತಲಾಗದಂತೆ ನೋಡಿಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು