Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:48 - ಪರಿಶುದ್ದ ಬೈಬಲ್‌

48 ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವದಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನೇ ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಶೆ ತುಮಿ ತುಮ್ಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಕಾಯ್ ಕರ್‍ಲ್ಯಾನಿ ಮನುನ್ ತುಮಿಚ್ ದಾಕ್ವುನ್ ದಿವ್ಕ್ ಲಾಗ್ಲ್ಯಾಶಿ, ತೆನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ. ತುಮಿ ತೆಂಕಾ ಸಮಾದ್ಯಾ ಭಾಂದ್ಲ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:48
14 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಪ್ರಭುವಿನ ಸಂದೇಶವನ್ನು ತಿಳಿಸಿದ ಪ್ರವಾದಿಗಳು ನಿಮಗೆ ಮಾದರಿಯಾಗಿರಲಿ. ಅವರು ಅನೇಕ ರೀತಿಯಲ್ಲಿ ಸಂಕಟವನ್ನು ಅನುಭವಿಸಿದರೂ ತಾಳ್ಮೆಯಿಂದಿದ್ದರು.


ಆ ಪ್ರವಾದಿಗಳನ್ನು ಕೊಂದವರ ಮಕ್ಕಳು (ಸಂತತಿಯವರು) ನೀವೇ ಎಂಬುದಕ್ಕೆ ಇದೇ ಆಧಾರವಾಗಿದೆ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕೆಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನ್ನ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ.


ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.


ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.


ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟುತ್ತೀರಿ. ಆದರೆ ಆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ!


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು