Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:1 - ಪರಿಶುದ್ದ ಬೈಬಲ್‌

1 ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾಚ್ ಎಳಾರ್ ಹಜಾರಾನ್ ಲೊಕಾಂಚೊ ತಾಂಡೊ ಥೈ ಗೊಳಾ ಹೊಲ್ಲೊ. ತೆಚೆಸಾಟ್ನಿ ತಿ ಲೊಕಾ ಎಕಾಮೆಕಾಕ್ನಿ ತುಡ್ವುನ್ ಘೆವ್‍ಲಾಗಲ್ಲಿ. ಜೆಜು ಅದ್ದಿ ಅಪ್ನಾಚ್ಯಾ ಶಿಸಾಕ್ನಿ “ಫಾರಿಜೆವಾಂಚ್ಯಾ ಇಸ್ಟಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ- ತಸೆ ಮಟ್ಲ್ಯಾರ್ ತೆಂಚ್ಯಾ ಕುಸ್ಡ್ಯಾಪಾನಾಚ್ಯಾ ವಿಶಯಾತ್ ಮಟ್ಲೊ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:1
18 ತಿಳಿವುಗಳ ಹೋಲಿಕೆ  

ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ದೈವಿಕನಲ್ಲದವನ ಜೀವವನ್ನು ದೇವರು ತೆಗೆದುಹಾಕುವಾಗ ಅವನಿಗೆ ನಿರೀಕ್ಷೆಯೇ ಇರುವುದಿಲ್ಲ.


ರಾಜನು ತನಗೆ ಆಪ್ತನಾಗಿದ್ದ ಅಧಿಕಾರಿಯನ್ನು ಪಟ್ಟಣದ ಬಾಗಿಲನ್ನು ಕಾಯಲು ಆರಿಸಿಕೊಂಡನು. ಆದರೆ ಜನರು ಶತ್ರುಗಳ ಪಾಳೆಯದಲ್ಲಿದ್ದ ಆಹಾರವನ್ನು ಪಡೆಯಲು ಓಡಿಹೋಗುವಾಗ ಅವನು ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ರಾಜನು ಎಲೀಷನ ಮನೆಗೆ ಬಂದಿದ್ದಾಗ, ದೇವಮನುಷ್ಯನು ಹೇಳಿದಂತೆಯೇ ಈ ಸಂಗತಿಗಳೆಲ್ಲಾ ಸಂಭವಿಸಿದವು.


ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು