Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:19 - ಪರಿಶುದ್ದ ಬೈಬಲ್‌

19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಮಾಕಾಚ್ ಮಿಯಾ “ಬರ್‍ಯಾ ನಸಿಬಾಚ್ಯಾ ಮಾನ್ಸಾ! ಸುಮಾರ್, ವರ್ಸಾನ್ ವರಿಸ್ ಪಾವಿ ಸರ್‍ಕೆ ಬರೆ ಬರೆ ತುಜೆಕ್ಡೆ ಅತ್ತಾ ಹಾಯ್ , ಖಾ, ಫಿ,ಅನಿ ಗಮ್ಮತ್ ಮಾರ್”, ಮನುನ್ ಘೆತಾ ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:19
39 ತಿಳಿವುಗಳ ಹೋಲಿಕೆ  

ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.


ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”


ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ನಿಮ್ಮ ಈ ಲೋಕದ ಜೀವನವು ಐಶ್ವರ್ಯದಿಂದ ತುಂಬಿದೆ. ನೀವು ಇಷ್ಟಪಟ್ಟದ್ದನ್ನೆಲ್ಲ ಪಡೆದುಕೊಂಡು ತೃಪ್ತರಾದಿರಿ. ವಧಿಸುವ ಕಾಲಕ್ಕೆ ಸಿದ್ಧವಾಗಿರುವ ಪಶುವಿನಂತೆ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.


ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;


ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.


ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.


ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.


ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.


ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.


ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ


ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.


ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.


ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.


“ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’


ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು