Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:31 - ಪರಿಶುದ್ದ ಬೈಬಲ್‌

31 ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ; ಇದರ ಕೂಡ ಅವೂ ನಿಮಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ತುಮಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಯವ್ಜಾ, ಅನಿ ಹೆಚ್ಯಾ ವಾಂಗ್ಡಾ ದೆವ್ ತುಮ್ಕಾ ಸಗ್ಳೆಬಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:31
14 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.


ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.


ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು