Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:45 - ಪರಿಶುದ್ದ ಬೈಬಲ್‌

45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ, ಜರ್ ತೊ ಆಳ್, ಅಪ್ನಾಚೊ ಧನಿ ಪರ್ತುನ್ ಯೌಕ್ ಲೈ ಎಳ್ ಹೊತಾ ಮನುನ್ ಯವ್ಜುನ್ ಘೆವ್ನ್, ಹುರಲ್ಲ್ಯಾ ಆಳಾಕ್ನಿ ಘೊಮನುಸ್ ಅನಿ ಬಾಯ್ಕೊಮನುಸ್ ಮನಿನಸ್ತಾನಾ ಮಾರ್‍ತಾ, ಅನಿ ಖಾತಾ, ಫಿತಾ, ಅನಿ ಫಿದೊಡೊ ಹೊವ್ನ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:45
31 ತಿಳಿವುಗಳ ಹೋಲಿಕೆ  

ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.


ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.


ನಿದ್ದೆ ಮಾಡುವ ಜನರು ರಾತ್ರಿಯಲ್ಲಿ ನಿದ್ರಿಸುತ್ತಾರೆ. ಕುಡಿದು ಅಮಲೇರುವವರು ರಾತ್ರಿಯಲ್ಲಿ ಕುಡಿದು ಅಮಲೇರುತ್ತಾರೆ.


ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು.


“ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರಿರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.”


“ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


“ಇಗೋ! ನೀವು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀವು ಅಪರಾಧಿಗಳೆಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿಮ್ಮನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.


ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


“ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.


ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು