ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.
ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.
“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.
ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.
“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.