Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:7 - ಪರಿಶುದ್ದ ಬೈಬಲ್‌

7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್, ತೆಚೆಸಾಟ್ನಿ ಭಿಂವ್ನಕಾಶಿ,ತುಮಿ ಗುಬ್‍ಯಾಂಚ್ಯಾನ್ಕಿ ಲೈ ಕಿಮ್ತಿಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:7
10 ತಿಳಿವುಗಳ ಹೋಲಿಕೆ  

ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.


ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.


ಮನುಷ್ಯನು ಕುರಿಗಿಂತ ಎಷ್ಟೋ ಬೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಸಬ್ಬತ್‌ದಿನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾದದ್ದು” ಎಂದು ಉತ್ತರಕೊಟ್ಟನು.


‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು