Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:11 - ಪರಿಶುದ್ದ ಬೈಬಲ್‌

11 ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಎಕ್ ಗಿರೊಲಾಗಲ್ಲಿ ಬಾಯ್ಕೊಮನುಸ್ ಹೊತ್ತಿ, ತೆನಿ ತಿಕಾ ಅಟ್ರಾ ವರ್ಸಾ ಅರಾಮನತ್ತ್ಯಾ ಸಾರ್ಕೆ ಕರಲ್ಲ್ಯಾನ್, ತಿ ಬಾಗುನ್ ಗೆಲ್ಲಿ, ತಿಕಾ ವಟ್ಟೊಚ್ ಇಬೆ ರಾವ್ಕ್ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:11
20 ತಿಳಿವುಗಳ ಹೋಲಿಕೆ  

ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.


ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.


ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.


ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.


ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.


ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ಯೆಹೋವನು ಬಿದ್ದುಹೋಗಿರುವವರನ್ನು ಮೇಲೆತ್ತುವವನೂ ಕುಗ್ಗಿಹೋದವರನ್ನು ಉದ್ಧರಿಸುವವನೂ ಆಗಿದ್ದಾನೆ.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಯೇಸು ಆಕೆಯನ್ನು ಕಂಡು, ತನ್ನ ಬಳಿಗೆ ಕರೆದು, “ಅಮ್ಮಾ, ನಿನ್ನ ಕಾಯಿಲೆ ನಿನ್ನನ್ನು ಬಿಟ್ಟುಹೋಗಿದೆ!” ಎಂದು ಹೇಳಿದನು.


ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು