Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:27 - ಪರಿಶುದ್ದ ಬೈಬಲ್‌

27 ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅನಿಬಿ ತೊ “ತುಮಿ ಕೊನ್ ಅನಿ ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ! ಮಾಜೆಕ್ನಾ ಧುರ್ ಜಾವಾ ಬುರ್ಶ್ಯಾ ಲೊಕಾನು!” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:27
15 ತಿಳಿವುಗಳ ಹೋಲಿಕೆ  

“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.


ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು