Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:33 - ಪರಿಶುದ್ದ ಬೈಬಲ್‌

33 ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತವ್ಡೆ ಪತರ್, ಮಾಜ್ಯಾ ವಾಟೆನ್ ಜಾವ್ನಗೆತ್ ರ್‍ಹಾತಾ.ಆಜ್ ಉದ್ದ್ಯಾ, ಅನಿ ಪರ್ವಾ, ಎಕ್ ಪ್ರವಾದ್ಯಾಕ್ ಜೆರುಜಲೆಮಾಚ್ಯಾ ಭಾಯ್ರ್ ಜಿವಾನಿ ಮಾರುಕ್ ಹೊಯ್ನಾ”. ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:33
10 ತಿಳಿವುಗಳ ಹೋಲಿಕೆ  

ಆದರೆ ಆತನು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಸಮಾರ್ಯದ ಜನರು ಆತನನ್ನು ಸ್ವಾಗತಿಸಲಿಲ್ಲ.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


“ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು.


ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು