Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:13 - ಪರಿಶುದ್ದ ಬೈಬಲ್‌

13 ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಿಯಾ ಮೊಟೆ ಸನಾಚೆ ಜೆವಾನ್‍ ಥವ್ತಾನಾ, ಅದು ಅಸಲ್ಲ್ಯಾಕ್ನಿ, ಗರಿಬಾಕ್ನಿ, ಸೊಟ್ಟ್ಯಾಕ್ನಿ, ಅನಿ ಕುಡ್ಡ್ಯಾಕ್ನಿ, ಬಾಗುನ್‍ ಗೆಲ್ಲ್ಯಾಕ್ನಿ, ಬಲ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:13
34 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ‘ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.


ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.


ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.


ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.


ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.


ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು