Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:18 - ಪರಿಶುದ್ದ ಬೈಬಲ್‌

18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ, ತೆ, ಸೊಯ್ರೆ, ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ, ಎಕ್ಯೆಕ್ ನೆವಾನ್ ದಿವ್ಕ್‌ ಲಾಗ್ಲೆ, ಪಯ್ಲೆಚ್ಯಾನ್ ತ್ಯಾ ಆಳಾಕ್ “ಮಿಯಾ ಎಕ್ ನ್ಹವೆ ಶೆತ್ ಖರಿದಿ ಕರ್‍ಲಾ, ಮಿಯಾ ಜಾವ್ನ್ ಉಲ್ಲೆ ತೆ ಬಗುಕ್ ಪಾಜೆ ದಯಾ ಕರುನ್ ಮಾಕಾ ಮಾಪ್ ಕರ್”, ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:18
24 ತಿಳಿವುಗಳ ಹೋಲಿಕೆ  

ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ!


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.


ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.


ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.


ಎರಡನೆಯವನು, ‘ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.


ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು