Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:15 - ಪರಿಶುದ್ದ ಬೈಬಲ್‌

15 ಆದ್ದರಿಂದ ಅವನು ಆ ದೇಶದ ನಿವಾಸಿಯೊಬ್ಬನ ಬಳಿ ಕೂಲಿಕೆಲಸಕ್ಕೆ ಸೇರಿಕೊಂಡನು. ಆ ಮನುಷ್ಯನು ಹಂದಿ ಮೇಯಿಸುವುದ್ಕಕಾಗಿ ಅವನನ್ನು ಹೊಲಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಹೋಗಿ ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿಕೊಂಡನು, ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆಸಾಟ್ನಿ, ತೊ ತ್ಯಾ ದೆಸಾತ್ಲ್ಯಾ ಎಕ್ ಮಾನ್ಸಾಚ್ಯಾ ಘರಾತ್ ಕಾಮಾಕ್ ಗೆಲೊ, ತ್ಯಾ ಸಾವ್ಕಾರಾನ್ ತೆಕಾ ಅಪ್ನಾಚ್ಯಾ ಶೆತಾತ್, ಡುಕ್ರಾ ರಾಕ್ತಲೆ ಕಾಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:15
27 ತಿಳಿವುಗಳ ಹೋಲಿಕೆ  

ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


“ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.


ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು