Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:17 - ಪರಿಶುದ್ದ ಬೈಬಲ್‌

17 “ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಕ್, ತೆಕಾ ಅರು ಯೆಲಿ, ಅನಿ “ಮಾಜ್ಯಾ ಬಾಬಾಚೆ ಘರಾತ್, ಸಗ್ಳಿ ಆಳಾ, ಜೆವ್ನ್-ಖಾವ್ನ್ ಹುರಿ ಸರ್ಕೆ, ಮಾಜ್ಯಾ ಬಾಬಾಕ್ಡೆ ಹಾಯ್, ಅನಿ ಮಿಯಾ ಹಿತ್ತೆ, ಭುಕೆನ್ ಮರುಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:17
19 ತಿಳಿವುಗಳ ಹೋಲಿಕೆ  

ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು. ಆದರೆ ನಾನು ಮಾಡಿದ ದುಷ್ಕೃತ್ಯಗಳ ಬಗ್ಗೆ ತಿಳಿದುಕೊಂಡೆನು. ಆದ್ದರಿಂದ ನಾನು ನನ್ನ ಮನಸ್ಸನ್ನೂ ಜೀವನವನ್ನೂ ಪರಿವರ್ತಿಸಿಕೊಂಡೆ. ತಾರುಣ್ಯಾವಸ್ಥೆಯಲ್ಲಿ ನಾನು ಮಾಡಿದ ಮೂರ್ಖತನಕ್ಕಾಗಿ ಲಜ್ಜೆಗೊಂಡೆನು; ನಾಚಿಕೆಪಟ್ಟೆನು.’”


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ.


ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು