Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:29 - ಪರಿಶುದ್ದ ಬೈಬಲ್‌

29 ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ತೆನಿ ಅಪ್ನಾಚ್ಯಾ ಬಾಬಾಕ್, “ಬಾಬಾ, ಎವ್ಡಿ ಸಗ್ಳಿ ವರ್ಸಾ, ಎಕ್ ಆಳಾಚ್ಯಾ ಸರ್ಕೆ, ಮಿಯಾ ತುಜ್ಯಾಸಾಟಿ ಕಾಮ್ ಕರ್‍ಲೊ, ಅನಿ ಕನ್ನಾಚ್ ಮಿಯಾ ತುಜಿ ಗೊಸ್ಟ್ ಮೊಡುಕ್‍ ನಾ. ತರ್, ತಿಯಾ ಮಾಕಾ ಕಾಯ್ ದಿಲೆ? ದೊಸ್ತಾಂಚ್ಯಾ ವಾಂಗ್ಡಾ ಮಜ್ಯಾ ಕರ್ ಮನುನ್. ಎಕ್ ಶೆಳ್ ಸೈತ್ ತಿಯಾ ಮಾಕಾ ದಿವ್ಕ್‌ನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:29
23 ತಿಳಿವುಗಳ ಹೋಲಿಕೆ  

ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.


ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.


ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”


ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.


‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.


ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.


ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


“ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.


ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು