Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:7 - ಪರಿಶುದ್ದ ಬೈಬಲ್‌

7 ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ನ್ಹವದಾರ್ ನ್ಹವ್ ಧರ್ಮಾನಿ ಚಲ್ತಲ್ಯಾ, ಅನಿ ಮನ್ ಬದ್ಲುಕ್ ತಯಾರ್ ನಸಲ್ಲ್ಯಾ ಲೊಕಾಂಚ್ಯಾನ್ಕಿ, ಮನ್ ಬದ್ಲುನ್ ಬರೊ ಹೊಲ್ಲ್ಯಾ ಎಕ್ ಪಾಪಿ ಮಾನ್ಸಾಸಾಟ್ನಿ ಸರ್‍ಗಾತ್ ಲೈ ಕುಶಿ ಹೊತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:7
13 ತಿಳಿವುಗಳ ಹೋಲಿಕೆ  

ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ‘ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು’ ಎಂದು ಹೇಳುವನು.


“ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು