Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:2 - ಪರಿಶುದ್ದ ಬೈಬಲ್‌

2 ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ‘ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಚೆಸಾಟ್ನಿ ತೆನಿ, ತ್ಯಾ ಕಾರ್‍ಬಾರ್‍ಯಾಕ್ ಬಲ್ವುಲ್ಯಾನ್, ಅನಿ ತುಜ್ಯಾ ವಿಶಯಾತ್ ಹೆ ಕಾಯ್ ಆಯ್ಕುಲಾ ಮಿಯಾ? ಅನಿ ಫಿಡೆ ತಿಯಾ ಮಾಜ್ಯಾ ಆಸ್ತಿಚೊ ಕಾರ್ಬಾರಿ ಹೊವ್ನ್ ರ್‍ಹಾತಲೆ ನಕ್ಕೊ, ಲಗ್ಗುನಾ ಕಾಯ್ ಹೊತ್ತೊ ಲೆಕ್ಕ್ ಮಾಕಾ ಹಾನುನ್ ಒಪಸ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:2
23 ತಿಳಿವುಗಳ ಹೋಲಿಕೆ  

ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.


ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.


ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು.


ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.


“ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.


ಯೇಸು ತನ್ನ ಶಿಷ್ಯರಿಗೆ ಹೀಗೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಈ ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಆ ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.


“ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು