Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:29 - ಪರಿಶುದ್ದ ಬೈಬಲ್‌

29 “ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಅಬ್ರಾಹಾಮಾನ್,“ತುಜ್ಯಾ ಭಾವಾಕ್ನಿ ಉಶಾರ್ಕಿ ದಿವ್ಕ್ ಮೊಯ್ಜೆ, ಅನಿ ಪ್ರವಾದ್ಯಾಂಚಿ ಪುಸ್ತಕಾ ಹಾತ್. ತ್ಯಾತುರ್‍ನಿ ಸಾಂಗಟಲ್ಲೆಚ್ ತುಜಿ ಭಾವಾ ಆಯ್ಕುಂದಿತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:29
13 ತಿಳಿವುಗಳ ಹೋಲಿಕೆ  

ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಆ ಪುಸ್ತಕವನ್ನು ತೆರೆದು ಈ ಭಾಗವನ್ನು ಓದಿದನು:


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು