ಲೂಕ 16:8 - ಪರಿಶುದ್ದ ಬೈಬಲ್8 “ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 “ಅಶೆ ಹ್ಯಾ ಕಾರ್ಬಾರ್ಯಾನ್ ಎವ್ಡೆ ಶಾನೆಪಾನ್ ವಾಪರಲ್ಲೆ ಬಗುನ್, ಸಾವ್ಕಾರಾನ್ ತೆಕಾ ಶಬಾಸ್ಕಿ ದಿಲ್ಯಾನ್. ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾತ್ಲ್ಯಾ ಲೊಕಾಕ್ನಿ, ತೆಂಚಿ ವಿಶಯಾ ಕಶಿ ಕರುನ್ ಸಂಬಾಳ್ತಲಿ ಮನುನ್, ದೆವಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಂಚ್ಯಾನ್ಕಿ, ಬರೆ ಗೊತ್ತ್ ಹಾಯ್”,ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.