Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:13 - ಪರಿಶುದ್ದ ಬೈಬಲ್‌

13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ, ತೊ ತೆರ್‍ಗಿ ವಸುಲ್ ಕರ್‍ತಲೊ, ಪಾಪಿ ಮಾನುಸ್, ಧುರುಚ್ ಇಬೆ ರ್‍ಹಾಲೊ, ತೆನಿ ಟಕ್ಲೆ ವೈರ್ ಕರುನ್ ಅಪ್ನಾಚೆ ಡೊಳೆ ಸೈತ್ ಸರ್‍ಗಾಕ್ ಲಾವುಕ್ನಾ, ಅಪ್ನಾಚೆ ಹಿರ್‍ದೆ ಬಡ್ವುನ್ ಘೆಟ್ಲ್ಯಾನ್, ಅನಿ “ದೆವಾ ಮಿಯಾ ಎಕ್ ಪಾಪಿ ಮಾನುಸ್, ಮಾಜಿ ದಯಾ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:13
45 ತಿಳಿವುಗಳ ಹೋಲಿಕೆ  

ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.


ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.


ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.


ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.


“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.


ನಮ್ಮ ಪೂರ್ವಿಕರು ಪಾಪಮಾಡಿದಂತೆಯೇ ನಾವು ಪಾಪ ಮಾಡಿದೆವು. ನಾವು ಅಪರಾಧಿಗಳಾಗಿದ್ದೆವು; ದುಷ್ಕೃತ್ಯಗಳನ್ನು ಮಾಡಿದೆವು!


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.


ಬಳಿಕ ಯೇಸು ಅವರಿಂದ ಸುಮಾರು ನೂರೈವತ್ತು ಅಡಿ ದೂರ ಹೋದನು. ಆತನು ಮೊಣಕಾಲೂರಿ,


ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು