Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:14 - ಪರಿಶುದ್ದ ಬೈಬಲ್‌

14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:14
39 ತಿಳಿವುಗಳ ಹೋಲಿಕೆ  

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ತಾನು ಬೇರೆಯವರಿಗಿಂತ ಉತ್ತಮನೆಂದು ತನ್ನನ್ನು ಭಾವಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಉನ್ನತಿಗೇರಿಸಲ್ಪಡುವನು.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.


ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.


ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.


ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು