Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:19 - ಪರಿಶುದ್ದ ಬೈಬಲ್‌

19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜುನ್ ತೆಕಾ, “ಮಾಕಾ ತಿಯಾ ಬರೊ ಮನುನ್ ಕಶ್ಯಾಕ್ ಮನ್ತೆ? ದೆವಾಕ್ ಎಕ್ಲ್ಯಾಕ್ ಸೊಡುನ್ ಕೊನ್ಬಿ ಬರೊ ನ್ಹಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:19
10 ತಿಳಿವುಗಳ ಹೋಲಿಕೆ  

ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.


ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು