Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:32 - ಪರಿಶುದ್ದ ಬೈಬಲ್‌

32 ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆಕಾ ಥೈ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊತಾ. ತೆನಿ ತೆಕಾ ಎಡ್ಸಡ್ತಾತ್, ತೆಚಿ ಮರ್‍ಯಾದ್ ಕಾಡ್ತ್ಯಾತ್, ಅನಿ ತೆಕಾ ಥುಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:32
26 ತಿಳಿವುಗಳ ಹೋಲಿಕೆ  

ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.


ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.


ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.


ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.


ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.


ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು.


ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.


(ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು