Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:21 - ಪರಿಶುದ್ದ ಬೈಬಲ್‌

21 ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಮಾಕಾ ತುಜೆ ಭಿಂಯೆ ಕರ್‍ಲೆ, ಕಶ್ಯಾಕ್ ಮಟ್ಲ್ಯಾರ್ ತಿಯಾ ಲೈ ಕಟೊರ್ ಮಾನುಸ್, ತುಜೆ ನ್ಹಯ್ ಮನುನ್ ಹೊತ್ತೆ ಸೈತ್ ತಿಯಾ ಕಾಡುನ್ ಘೆತೆ, ಅನಿ ಪೆರು ನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:21
16 ತಿಳಿವುಗಳ ಹೋಲಿಕೆ  

ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


ದೇವರ ಪ್ರೀತಿಯು ಎಲ್ಲಿರುವುದೋ ಅಲ್ಲಿ ಭಯವಿರುವುದಿಲ್ಲ. ಏಕೆಂದರೆ ದೇವರ ಪರಿಪೂರ್ಣ ಪ್ರೀತಿಯು ಭಯವನ್ನು ತೆಗೆದುಹಾಕುತ್ತದೆ. ದೇವರ ದಂಡನೆಯೇ ಒಬ್ಬ ವ್ಯಕ್ತಿಯಲ್ಲಿ ಭಯವನ್ನು ಉಂಟುಮಾಡುವಂಥದ್ದು. ಆದ್ದರಿಂದ ಭಯವಿರುವವನಲ್ಲಿ ದೇವರ ಪ್ರೀತಿ ಪರಿಪೂರ್ಣವಾಗಿಲ್ಲ.


ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.


ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.


ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


“ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.


“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು