Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:8 - ಪರಿಶುದ್ದ ಬೈಬಲ್‌

8 ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಾಕ್ಕೆವ್ಸ್ ಉಟುನ್ ಇಬೆ ರ್‍ಹಾಲೊ, ಅನಿ ಧನಿಯಾಕ್ “ಗುರುಜಿ ಆಯ್ಕಾ! ಮಾಜೆ ಮನುನ್ ಹೊತ್ತ್ಯಾತ್ಲೆ ಅರ್ದ್ಯಾಕ್ ಅರ್‍ದೆ, ಮಿಯಾ ಗರಿಬಾಕ್ನಿ ದಿತಾ, ಅನಿ ಕೊನಾಕ್-ಕೊನಾಕ್ ಮಿಯಾ ಪಸ್ವುಲಾ,ತೆಂಕಾ ತೆಚ್ಯಾ ಚಾರ್ ಪಟ್ ಪರ್ತುನ್ ದಿತಾ”, ಮಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:8
22 ತಿಳಿವುಗಳ ಹೋಲಿಕೆ  

ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.


ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.


ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


“ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


“ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.


ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು