Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:10 - ಪರಿಶುದ್ದ ಬೈಬಲ್‌

10 ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ದೆವಾಚ್ಯಾ ದುತಾನ್ “ಭಿಂವ್‌ನಕಾಶಿ ಸಗ್ಳ್ಯಾ ಲೊಕಾಕ್ನಿ ಖುಶಿ ಹಾನ್ತಲಿ ಬರಿ ಖಬರ್ ಮಿಯಾ ತುಮ್ಕಾ ಘೆವ್ನ್ ಯೆಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:10
30 ತಿಳಿವುಗಳ ಹೋಲಿಕೆ  

ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.


ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.


ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


“ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು