Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:38 - ಪರಿಶುದ್ದ ಬೈಬಲ್‌

38 ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ಎಳಾರ್ ತಿ ಪೊರಾಂಚ್ಯಾ ಬಾಯ್ ಬಾಬಾಕ್ಡೆ ಯೆಲಿ, ದೆವಾಕ್ ಧನ್ಯವಾದ್ ದಿಲಿನ್, ಅನಿ ಜೆರುಜಲೆಮಾಚ್ಯಾ ಸುಟ್ಕೆಚಿ ವಾಟ್ ಬಗುನ್ಗೆತ್ ಹೊತ್ತ್ಯಾಂಚ್ಯಾಕ್ಡೆ, ತೆನಿ ಹ್ಯಾ ಪೊರಾಂಚ್ಯಾ ವಿಶಯಾತ್ ಬೊಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:38
11 ತಿಳಿವುಗಳ ಹೋಲಿಕೆ  

ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ವರ್ಣಿಸಲಸಾಧ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.


“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.


ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು