Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:39 - ಪರಿಶುದ್ದ ಬೈಬಲ್‌

39 ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖಾಯ್ದ್ಯಾತ್ ಸಾಂಗಲ್ಲೆ ಸಾರ್ಕೆ. ಸಗ್ಳೆ ಶಾಸ್ತರ್ ಕರುನ್ ಸರಲ್ಲ್ಯಾ ತನ್ನಾ, ಮರಿ ಅನಿ ಜುಜೆ ಅಪ್ನಾಚ್ಯಾ ಸ್ವಂತ್ ಗಾವಾಕ್ ಗಾಲಿಲಿಯಾತ್ಲ್ಯಾ ನಜರೆತಾಕ್ ಪರ್ತುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:39
11 ತಿಳಿವುಗಳ ಹೋಲಿಕೆ  

ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಎಲಿಜಬೇತಳು ಆರು ತಿಂಗಳ ಗರ್ಭಿಣಿಯಾಗಿದ್ದಾಗ, ದೇವರು ತನ್ನ ದೂತನಾದ ಗಬ್ರಿಯೇಲನನ್ನು ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಲ್ಲಿ ವಾಸಿಸುತ್ತಿದ್ದ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು. ಆಕೆಗೆ ದಾವೀದನ ಮನೆತನದ ಯೋಸೇಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯಳು.


ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.


ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು