Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚೆಸಾಟ್ನಿ ಜುಜೆಬಿ ಗಾಲಿಲಿಯಾಚ್ಯಾ ನಜರೆತ್ ಮನ್ತಲ್ಯಾ ಗಾವಾತ್ನಾ, ದಾವಿದ್ ರಾಜಾಚ್ಯಾ ಉಪಾಜಲ್ಲ್ಯಾ ಗಾವಾಕ್, ಜುದೆಯಾಚ್ಯಾ ಬೆತ್ಲೆಹೆಮಾಕ್ ಗೆಲೊ.ತೊ ದಾವಿದಾಚ್ಯಾ ಘರಾನ್ಯಾಚೊ, ತಸೆ ಮನುನ್ ತೊ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:4
24 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.


ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ತರುವಾಯ ಬೋವಜನು ಬೆತ್ಲೆಹೇಮಿನಿಂದ ಹೊಲಕ್ಕೆ ಬಂದನು. ಅವನು ಕೆಲಸಗಾರರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಎಂದು ಹರಸಿದನು. ಆ ಕೆಲಸಗಾರರು, “ಯೆಹೋವನು ನಿನಗೆ ಕೃಪೆ ತೋರಲಿ” ಎಂದು ಉತ್ತರಿಸಿದರು.


ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.


ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು. ದಾವೀದನು, “ನಾನು ನಿಮ್ಮ ಸೇವಕನಾದ ಬೆತ್ಲೆಹೇಮಿನ ಇಷಯನ ಮಗ” ಎಂದು ಉತ್ತರಿಸಿದನು.


ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೆತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.


ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.


ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.


ಪದ್ದನ್‌ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು.


ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು