Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಅವನು ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನೂ ಹೊಡೆದು, ಅವಮಾನ ಮಾಡಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತೋಟದ ಯಜಮಾನ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವನನ್ನೂ ಹೊಡೆದು, ಬಡಿದು ಅವಮಾನ ಮಾಡಿ ಬರಿಗೈಯಲ್ಲೇ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ಮನುನ್ ತೆನಿ, ಅನಿಎಕ್ ಆಳಾಕ್ ಧಾಡುನ್ ದಿಲ್ಯಾನ್; ಖರೆ ಗುತ್ಕೆ ಧರಲ್ಲ್ಯಾನಿ ತೆಕಾ ಧರುನ್ ಮಾರ್ ಘಾಟ್ಲ್ಯಾನಿ, ಅನಿ ತೆಚಿ ಮರ್‍ಯಾದ್ ಕಾಡ್ಲ್ಯಾನಿ. ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:11
8 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.


ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.


ಆದ್ದರಿಂದ ಅವನು ಮೂರನೆಯ ಸಲ ತನ್ನ ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ಆ ರೈತರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಗೆ ಅಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು