Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:14 - ಪರಿಶುದ್ದ ಬೈಬಲ್‌

14 ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ, ತ್ಯಾ ಲೆಕಾಕ್ ಬಗಟಲ್ಲೆಚ್ ತೆ ಗುತ್ಕ್ಯಾಚೆ ಎಕಾಮೆಕಾಕ್ನಿ “ಹ್ಯೊ ಹ್ಯಾ ಮಳ್ಯಾಚ್ಯಾ ಮಾಲ್ಕಾಚೊ ಲೆಕ್, ಯೆವಾ ಹೆಕಾ ಜಿವಾನಿಚ್ ಮಾರುಂವ್ವಾ, ಅನಿ ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:14
20 ತಿಳಿವುಗಳ ಹೋಲಿಕೆ  

ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.


ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.


ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.


ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, “‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.


ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.


ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.


ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!


ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.


“ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.


ಬಳಿಕ ಆ ಮಗನನ್ನು ತೋಟದಿಂದ ಹೊರಕ್ಕೆ ನೂಕಿಕೊಂಡು ಹೋಗಿ ಕೊಂದುಹಾಕಿದರು. “ಆಗ ತೋಟದ ಯಜಮಾನನು ಏನು ಮಾಡುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು