Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:23 - ಪರಿಶುದ್ದ ಬೈಬಲ್‌

23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕೊಮನ್ಸಿಂಚಿ, ಅನಿ ಬಾರಿಕ್ಲಿ ಪೊರಾ ಹೊತ್ತ್ಯಾ ಬಾಯ್ಕೊಮನ್ಸಿಂಚಿ ಗತ್ ಕಾಯ್ ಸಾಂಗು! ಹ್ಯಾ ಜಿಮ್ನಿರ್ ಲೈ ಮೊಟೊ ಸಂಕಟ್ ಯೆವ್ನ್ ಪಾವ್ತಾ, ಅನಿ ದೆವಾಚಿ ಶಿಕ್ಷಾ ಹ್ಯಾ ಲೊಕಾಂಚ್ಯಾ ವರ್‍ತಿ ಯೆವ್ನ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:23
18 ತಿಳಿವುಗಳ ಹೋಲಿಕೆ  

‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ.


“ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ.


“ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ!


ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ಶ್ರೀಮಂತ ಜನರೇ, ಕೇಳಿರಿ! ನಿಮಗೆ ಮಹಾಕಷ್ಟವು ಬರಲಿರುವುದರಿಂದ ಗೋಳಾಡಿರಿ, ದುಃಖಪಡಿರಿ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.”


ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.


“ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.


ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು