Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:24 - ಪರಿಶುದ್ದ ಬೈಬಲ್‌

24 ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಉಲ್ಲ್ಯಾಸ್ಯಾಕ್ನಿ ಚಾಕ್ವಾನಿ ತೊಡುನ್ ಮಾರುನ್ ಹೊತಾ, ಅನಿ ಹುರಲ್ಲ್ಯಾಕ್ನಿ , ಗುಲಾಮ್ ಕರುನ್ ದುಸ್ರ್ಯಾ-ದುಸ್ರ್ಯಾ ದೆಸಾಕ್ನಿ ಘೆವ್ನ್ ಜಾವ್ನ್ ಹೊತಾ, ಅನಿ ತೆಂಚೊ ಎಳ್ ರ್‍ಹಾಯ್ ಪತರ್ ಮಟ್ಲ್ಯಾರ್, ಜುದೆವ್ ನ್ಹಯ್ ಹೊತ್ತಿ ಲೊಕಾ ಜೆರುಜಲೆಮಾಚೆ ತುಕ್ಡೆ-ತುಕ್ಡೆ ಕರುನ್ ಟಾಕ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:24
16 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.


ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು.


ಆದ್ದರಿಂದ ಯೆಹೋಶುವನು ಮತ್ತು ಅವನ ಸೈನಿಕರು ಅಮಾಲೇಕ್ಯರನ್ನು ಯುದ್ಧದಲ್ಲಿ ಸೋಲಿಸಿದರು.


“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು