Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:34 - ಪರಿಶುದ್ದ ಬೈಬಲ್‌

34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಉಶಾರ್ಕಿ ರ್‍ಹಾವಾ! ಸನಾ ಕರ್‍ತಲ್ಯಾತ್, ಅನಿ ನಿಶೆತ್, ಅನಿ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾತ್ನಿಚ್ ರ್‍ಹಾವ್ನಕಾಶಿ, ತೊ ದಿಸ್ ಎಗ್ದಮ್ ಅಚಾನಕ್ ತುಮ್ಚೆ ವರ್‍ತಿ ಯೆಯ್ಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:34
37 ತಿಳಿವುಗಳ ಹೋಲಿಕೆ  

ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.


ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಆದ್ದರಿಂದ ಎಚ್ಚರಿಕೆಯಾಗಿರಿ! “ನಿನ್ನ ಸಹೋದರನು ಪಾಪಮಾಡಿದರೆ, ಅವನನ್ನು ಖಂಡಿಸು. ಒಂದುವೇಳೆ ಅವನೇನಾದರೂ ತನ್ನ ತಪ್ಪಿಗಾಗಿ ಪಶ್ಚಾತ್ತಾಪಪಟ್ಟರೆ ಅವನನ್ನು ಕ್ಷಮಿಸು.


ಆದರೆ ಪ್ರಭುವು ಅವಳಿಗೆ, “ಮಾರ್ಥಾ, ಮಾರ್ಥಾ, ನೀನು ಅನೇಕ ಕೆಲಸಗಳ ಬಗ್ಗೆ ಚಿಂತಿಸುತ್ತಾ ಗಲಿಬಿಲಿಯಾಗಿರುವೆ.


“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.


ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.


ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.


ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.


ಕುಡುಕರ ಮತ್ತು ಹೊಟ್ಟೆಬಾಕರ ಸ್ನೇಹಿತನಾಗಿರಬೇಡ.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು.


ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.


ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು