Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:37 - ಪರಿಶುದ್ದ ಬೈಬಲ್‌

37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:37
15 ತಿಳಿವುಗಳ ಹೋಲಿಕೆ  

ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.


ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು.


ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.


ಬಳಿಕ ಆತನು ಆ ಸ್ಥಳವನ್ನು ಬಿಟ್ಟು ಬೆಥಾನಿ ಪಟ್ಟಣಕ್ಕೆ ಹೊರಟುಹೋದನು. ಯೇಸು ಆ ರಾತ್ರಿ ಅಲ್ಲಿಯೇ ತಂಗಿದನು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.


ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)


ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)


ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.


ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು.


ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು.


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.


ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,


ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.


ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು