Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:18 - ಪರಿಶುದ್ದ ಬೈಬಲ್‌

18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಸಾಂಗ್ತಾ ಅತ್ತಾಚ್ಯಾನ್, ದೆವಾಚೆ ರಾಜ್ ಯೆಯ್ ಪತರ್ ಮಿಯಾ ಅನಿ ಹಿ ವಾಯ್ನ್ ಫಿ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:18
22 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.


ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ.


ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು.


ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.


ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


“ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು