Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:29 - ಪರಿಶುದ್ದ ಬೈಬಲ್‌

29 ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇವಿುಸಿದ ಪ್ರಕಾರ ನಾನು ನಿಮಗೂ ನೇವಿುಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ಮಾಜ್ಯಾ ಬಾಬಾನ್ ಮಾಕಾ ಅದಿಕಾರ್ ಚಾಲ್ವುಕ್ ಮನುನ್ ಹಕ್ಕ್ ದಿಲ್ಯಾ ಸರ್ಕೊ, ಮಿಯಾಬಿ ತುಮ್ಕಾ ಅದಿಕಾರ್ ಚಾಲ್ವುಕ್ ಹಕ್ಕ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:29
14 ತಿಳಿವುಗಳ ಹೋಲಿಕೆ  

ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು. ಪರಲೋಕರಾಜ್ಯ ಅವರದು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು