Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:53 - ಪರಿಶುದ್ದ ಬೈಬಲ್‌

53 ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಮಿಯಾ ಸದ್ದಿಚ್ ದೆವಾಚಿ ಗುಡಿ ತುಮ್ಚ್ಯಾ ವಾಂಗ್ಡಾಚ್ ರ್‍ಹಾಯ್, ಖರೆ ತುಮಿ ಮಾಕಾ ಧರುಕ್‍ನ್ಯಾಶಿ. ಖರೆ ಕಾಳೊಕ್ ಅಪ್ನಾಚೊ ರಾಜ್ ಚಾಲ್ವುತಲೊ ಎಳ್ ಹ್ಯೊ, ತುಮ್ಚೊ ಎಳ್ ಹ್ಯೊ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:53
20 ತಿಳಿವುಗಳ ಹೋಲಿಕೆ  

ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?


ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.


ಯೇಸು ಕೊಟ್ಟ ರೊಟ್ಟಿಯನ್ನು ತೆಗೆದುಕೊಂಡ ನಂತರ ಯೂದನು ಅಲ್ಲಿಂದ ಹೊರಟುಹೋದನು. ಆಗ ರಾತ್ರಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು