Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:22 - ಪರಿಶುದ್ದ ಬೈಬಲ್‌

22 ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಪಿಲಾತಾನ್ ತಿನ್ವೆಪಟಿ ತೆಂಕಾ “ಖರೆ, ಮರ್‍ನಾಚಿ ಶಿಕ್ಷಾ ದಿ ಸರ್ಕೆ ಕಸ್ಲಿ ಚುಕ್ ತೆನಿ ಕರ್‍ಲ್ಯಾನಾಯ್, ಮಾಕಾ ತರ್ ತೆಚಿ ಕಸ್ಲಿಬಿ ಚುಕ್ ಗಾವುಕ್ನಾ, ತಸೆ ಮನುನ್ ಮಿಯಾ ತೆಕಾ ಬಾರ್‍ಕೊಲಾನಿ ಮಾರುಕ್‍ಲಾವ್ತಾ, ಅನಿ ಸೊಡುನ್ ದಿತಾ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:22
8 ತಿಳಿವುಗಳ ಹೋಲಿಕೆ  

ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಪಿಲಾತನು ಯೇಸುವನ್ನು ಬಿಡಿಸಬೇಕೆಂದಿದ್ದನು. ಆದ್ದರಿಂದ ಯೇಸುವನ್ನು ಬಿಟ್ಟುಬಿಡೋಣ ಎಂದು ಪಿಲಾತನು ಮತ್ತೆ ಅವರಿಗೆ ಹೇಳಿದನು.


ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.


ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.


ಆದರೆ ಅವರು ಮತ್ತೆ, “ಅವನನ್ನು ಕೊಲ್ಲಿಸು! ಅವನನ್ನು ಶಿಲುಬೆಗೇರಿಸು!” ಎಂದು ಕೂಗಿದರು.


ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು