Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:25 - ಪರಿಶುದ್ದ ಬೈಬಲ್‌

25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಇಚಾರಲ್ಲ್ಯಾ ಡಂಗೊ ಉಟ್ವುನ್, ಅನಿ ಲೊಕಾಕ್ನಿ ಜಿವಾನಿ ಮಾರುನ್ ಬಂದಿಖಾನ್ಯಾತ್ ಹೊತ್ತ್ಯಾಕ್ ತೆನಿ ಸೊಡುನ್ ದಿಲ್ಯಾನ್, ಅನಿ ತುಮ್ಕಾ ಕಾಯ್ ಪಾಜೆ ತೆ ಕರಾ ಮನುನ್ ಜೆಜುಕ್ ತೆಂಚ್ಯಾ ತಾಬೆತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:25
12 ತಿಳಿವುಗಳ ಹೋಲಿಕೆ  

ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.


ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು.


ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.


ಪಿಲಾತನು ಅವರ ಬಯಕೆಯನ್ನು ಈಡೇರಿಸಲು ನಿರ್ಧರಿಸಿದನು.


ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.


ಆಗ ಪಿಲಾತನು, ಯೇಸುವನ್ನು ಶಿಲುಬೆಗೇರಿಸಲು ಅವರಿಗೆ ಒಪ್ಪಿಸಿಕೊಟ್ಟನು. ಸೈನಿಕರು ಯೇಸುವನ್ನು ಕರೆದೊಯ್ದರು.


ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟಬಂದ ಹಾಗೆ ಮಾಡಬಹುದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು