26 ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸೀಮೋನ ಎಂಬವನನ್ನು ಕಂಡರು. ಸೀಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸೀಮೋನನನ್ನು ಬಲವಂತ ಮಾಡಿದರು.
26 ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
26 ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.
26 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
26 ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.