Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:33 - ಪರಿಶುದ್ದ ಬೈಬಲ್‌

33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಶೆ ತೆನಿ “ಟಕ್ಲ್ಯಾಚ್ಯಾ ಬುರ್‍ಡ್ಯಾಚೊ ಜಾಗೊ” ಮನ್ತಲ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಜೆಜುಕ್ ಕುರ್ಸಾರ್ ಮಾರ್‍ಲ್ಯಾನಿ, ಅನಿ ತ್ಯಾ ದೊಗ್ಯಾ ಚೊರಾಕ್ನಿ, ಎಕ್ಲ್ಯಾಕ್ ಜೆಜುಚ್ಯಾ ಉಜ್ವ್ಯಾಬಾಜುಕ್, ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:33
19 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


(ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


“ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.


ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


“ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.


ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು