Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:5 - ಪರಿಶುದ್ದ ಬೈಬಲ್‌

5 ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತೆನಿ, “ಅನಿ ಜೊರಾನ್ ಸಗ್ಳ್ಯಾ ಜುದೆಯಾತ್ಲ್ಯಾ ಲೊಕಾಕ್ನಿ ಶಿಕ್ವುನ್ಗೆತ್, ಹ್ಯೊ ಲೊಕಾತ್ನಿ ಡಂಗೊ ಉಟ್ವುಲಾ, ತೆನಿ ಅಪ್ನಾಚೆ ಹೆ ಕಾಮ್ ಗಾಲಿಲಿಯಾತ್ನಾ ಚಾಲು ಕರಲ್ಲ್ಯಾನ್, ಅನಿ ಅತ್ತಾ ತೊ, ಹಿತ್ತೆ ಯೆವ್ನ್ ಪಾವ್ಲಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:5
24 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


“ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.


ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,


ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು.


ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.


“ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ.


ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,


ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.


ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು