Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:32 - ಪರಿಶುದ್ದ ಬೈಬಲ್‌

32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ತೆನಿ ಎಕಾಮೆಕಾಕ್ನಿ,“ ವಾಟೆನ್ ಯೆತಾನಾ ತೊ ಅಮ್ಚೆಕ್ಡೆ ಬೊಲುನ್ಗೆತ್ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಸಾಂಗುನ್ಗೆತ್ ಯೆತಾನಾ, ಅಮ್ಚ್ಯಾ ಭುತ್ತುರುಚ್ ಎಕ್ ಆಗ್ ಪೆಟ್ಲ್ಯಾ ಸರ್ಕೆ ಹೊಯ್ನಶಿ ಕಾಯ್?” ಮನುನ್ ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:32
14 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು,


ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.


ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ನಾನು ಹೇಳಿದ ಈ ವಿಷಯಗಳು ಆತನನ್ನು ಸಂತೋಷಗೊಳಿಸಲಿ. ನಾನಾದರೋ ಯೆಹೋವನಲ್ಲಿ ಸಂತೋಷಿಸುವೆನು.


ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.


ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು