Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:49 - ಪರಿಶುದ್ದ ಬೈಬಲ್‌

49 ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಅನಿ ಮಿಯಾ ಮಾಜ್ಯಾ ಬಾಬಾನ್ ತುಮ್ಕಾ ಗೊಸ್ಟ್ ದಿಲ್ಲೆ ಧಾಡುನ್ ದಿತಾ, ಖರೆ “ತುಮಿ ವೈನಾ ತುಮ್ಚೆ ವರ್‍ತಿ ತೊ ಬಳ್ ಉತ್ರುನ್ ಯೆಯ್ ಪತರ್ ಜೆರುಜಲೆಮಾತುಚ್ ರ್‍ಹಾವ್ಕ್ ಪಾಜೆ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:49
12 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


“ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.


ಪೌಲ ತಿಮೊಥೆಯರು ಮುಸಿಯ ನಾಡಿನ ಸಮೀಪಕ್ಕೆ ಹೋದರು. ಅವರು ಬಿಥೂನಿಯ ನಾಡಿನೊಳಗೆ ಹೋಗಬೇಕೆಂದಿದ್ದರು. ಆದರೆ ಯೇಸುವಿನ ಆತ್ಮನು ಅಲ್ಲಿಗೆ ಹೋಗದಂತೆ ಅವರನ್ನು ತಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು