Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:5 - ಪರಿಶುದ್ದ ಬೈಬಲ್‌

5 ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಂಕಾ ಬಗುನ್ ಭಿಂವ್ನ್ ತ್ಯಾ ಬಾಯ್ಕೊಮನ್ಸಾ ಜಿಮ್ನಿರ್ ಡಬ್ ಪಡ್ಲ್ಯಾ ತನ್ನಾ ತ್ಯಾ ಮಾನ್ಸಾನಿ ಝಿತ್ತೊ ಹೊತ್ತ್ಯಾಕ್, ಮರಲ್ಲ್ಯಾತ್ನಿ ಯೆವ್ನ್ ಕಶ್ಯಾಕ್ ಹುಡ್ಕುಕ್ ಲಾಗ್ಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:5
15 ತಿಳಿವುಗಳ ಹೋಲಿಕೆ  

ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.


ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.


ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.


ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?


ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು