Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:13 - ಪರಿಶುದ್ದ ಬೈಬಲ್‌

13 ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೇವಿುಸಿದ ಹಾಸಲಿಗಿಂತ ಹೆಚ್ಚಾಗಿ ಏನೂ ಎಳಕೊಳ್ಳಬೇಡಿರಿ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಂಕಾ ಜುವಾಂವಾಕ್ “ಕವ್ಡೆ ವಸುಲ್ ಕರ್‍ತಲೆ ಹಾಯ್,ತೆಚೆನ್ ಜಾಸ್ತಿಚೆ ವಸುಲ್ ಕರುನಕಾಶಿ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:13
15 ತಿಳಿವುಗಳ ಹೋಲಿಕೆ  

ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು.


ಸುಂಕವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.


ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು