Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:25 - ಪರಿಶುದ್ದ ಬೈಬಲ್‌

25 “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಎಲಿಯಾ ಪ್ರವಾದ್ಯಾಚ್ಯಾ ಎಳಾರ್ ಇಸ್ರಾಯೆಲಾತ್ ಲೈ ಘವ್ ನಸಲ್ಲ್ಯಾ ಬಾಯ್ಕಾಮನ್ಸಾ ಹೊತ್ತ್ಯಾ, ಸಾಡೆ ತಿನ್ ವರ್ಸಾ ಪಾವ್ಸ್ ನಸ್ತಾನಾ ಸಗ್ಳ್ಯಾ ದೆಶಾತ್ ಬರಗಾಲ್ ಪಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:25
12 ತಿಳಿವುಗಳ ಹೋಲಿಕೆ  

ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.


ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು