Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:34 - ಪರಿಶುದ್ದ ಬೈಬಲ್‌

34 “ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ನಜರೆತಾಚ್ಯಾ ಜೆಜು ಅಮ್ಚ್ಯಾಕ್ನಾ ತುಕಾ ಕಾಯ್ ಪಾಜೆ? ಅಮ್ಕಾ ನಾಸ್ ಕರುಕ್ ಮನುನ್ ಎಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್, ತಿಯಾ ದೆವಾನ್ ಧಾಡಲ್ಲೊ ಪವಿತ್ರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:34
22 ತಿಳಿವುಗಳ ಹೋಲಿಕೆ  

ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಯೇಸು ಪರಿಶುದ್ಧನಾಗಿದ್ದನು ಮತ್ತು ಒಳ್ಳೆಯವನಾಗಿದ್ದನು. ಆದರೆ ನೀವು ಆತನನ್ನು ತಿರಸ್ಕರಿಸಿದಿರಿ. ಆತನ ಬದಲಾಗಿ ಕೊಲೆಗಾರನನ್ನು ಬಿಡುಗಡೆ ಮಾಡಬೇಕೆಂದು ಪಿಲಾತನನ್ನು ಬೇಡಿಕೊಂಡಿರಿ.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.


ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.


ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ಸಭಾಮಂದಿರದಲ್ಲಿ ದೆವ್ವದಿಂದ ಪೀಡಿತನಾದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾದ ಧ್ವನಿಯಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು